ಮಂಗಳೂರು | ಗಾಂಜಾ, ಚರಸ್ ಮಾರಾಟ ಪ್ರಕರಣ: ಮೂವರು ಆರೋಪಿಗಳ ಬಂಧನ; 8 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ

Update: 2023-01-13 07:24 GMT

ಮಂಗಳೂರು, ಜ.13: ಗಾಂಜಾ ಮತ್ತು ಚರಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿರುವುದಾಗಿ ವರದಿಯಾಗಿದೆ.

ಕಾರ್ಕಳ ಬಜಗೋಳಿಯ ಸುಖೇತ್ ಕಾವಾ ಯಾನೆ ಚುಕ್ಕಿ(33), ತಮಿಳುನಾಡಿನ ಅರವಿಂದ (24), ಕಾರ್ಕಳದ ಸುನೀಲ್ (32) ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ತಿಳಿಸಿದ್ದಾರೆ.

ಬಂಧಿತರಿಂದ 500 ಗ್ರಾಂ ಚರಸ್ ಮತ್ತು 1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಸೊತ್ತುಗಳ ಮೌಲ್ಯ 8 ಲಕ್ಷ ರೂ. ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ತಿಳಿಸಿದ್ದಾರೆ.

Similar News