ಬಹು ಕೋಟಿ ರೂ. ವಂಚನೆ ಆರೋಪ: ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಬಂಧನ
Update: 2023-01-13 16:20 GMT
ಬೆಂಗಳೂರು, ಜ.13: ಅಕ್ರಮ ಹಣ ವರ್ಗಾವಣೆ ಮತ್ತು ಬಹುಕೋಟಿ ರೂ.ಮೊತ್ತದ ವಂಚನೆ ಮಾಡಿದ ಆರೋಪ ಸಂಬಂಧ ಕರಣ್ ಗ್ರೂಪ್ ಬಿಲ್ಡರ್ಸ್ ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾನನ್ನು ಜಾರಿ ನಿರ್ದೇಶನಾಲಯ (ಈಡಿ) ಬಂಧಿಸಿದೆ ಎಂದು ವರದಿಯಾಗಿದೆ.
ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆ ಹೆಸರಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಆರೋಪಿಯನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ 10 ದಿನ ಈಡಿ ವಶಕ್ಕೆ ಪಡೆದುಕೊಂಡಿದ್ದಾರೆ.