ಯಕ್ಷಗಾನ ಸಮ್ಮೇಳನಾಧ್ಯಕ್ಷ ಡಾ.ಜೋಶಿಗೆ ಅಧಿಕೃತ ಆಹ್ವಾನ

Update: 2023-01-13 16:33 GMT

ಉಡುಪಿ: ಉಡುಪಿಯ ಎಂಜಿಎಂ ಕಾಲೇಜು ಆವರಣದಲ್ಲಿ ಇದೇ ಫೆ.11 ಮತ್ತು 12ರಂದು ನಡೆಯಲಿರುವ ರಾಜ್ಯಮಟ್ಟದ ಪ್ರಥಮ ಸಮಗ್ರ ಯಕ್ಷಗಾನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದಡಾ.ಎಂ. ಪ್ರಭಾಕರ ಜೋಶಿ ಅವರ ಮನೆಗೆ ತೆರಳಿದ ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್. ಹೆಗಡೆ, ಡಾ.ಎಂ.ಪ್ರಭಾಕರ ಜೋಶಿ ಮತ್ತು ಸುಚೇತಾ ಜೋಶಿ ಅವರನ್ನು ಅಭಿನಂದಿಸಿ ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಿದರು.

ಸುಮಾರು ಒಂದು ಗಂಟೆ ಕಾಲ ಅವರೊಂದಿಗಿದ್ದು ಎರಡು ದಿನಗಳ  ಸಮ್ಮೇಳನದ ರೂಪುರೇಷೆ ಮತ್ತು ಈವರೆಗೆ ಆದ ಬೆಳವಣಿಗೆಯನ್ನು ತಿಳಿಸಿ, ಸುದೀರ್ಘ ಮಾತುಕತೆ ನಡೆಸಿದರು.

ಈ ವೇಳೆ ಸಮ್ಮೇಳನದ ಸಹ ಸಂಚಾಲಕರಾದ ಮುರಲಿ ಕಡೆಕಾರ್, ನವನೀತ್ ಶೆಟ್ಟಿ ಕದ್ರಿ ಮತ್ತು ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕತಿ ಸಚಿವ ವಿ.ಸುನಿಲ್ ಕುಮಾರ್ ಅವರು ಸಹ ದೂರವಾಣಿಯ ಮೂಲಕ ಡಾ.ಜೋಶಿ ಅವರನ್ನು ಅಭಿನಂದಿಸಿ ಸಮ್ಮೇಳನಕ್ಕೆ ಆಹ್ವಾನಿಸಿದರು.

Similar News