ಬ್ರಹ್ಮಾವರ: ಜೀಪು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Update: 2023-01-13 18:10 GMT

ಬ್ರಹ್ಮಾವರ: ಬುಲೆರೋ ಜೀಪು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಉಪ್ಪೂರು ಗ್ರಾಮದ ಕೆ.ಜಿ.ರೋಡ್‌ನ ರಾ.ಹೆ-66ರಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಜಯಲಕ್ಷ್ಮೀ ಭಟ್ ಎಂದು ಗುರುತಿಸಲಾಗಿದೆ.  ಇವರು ಬೆಳಗ್ಗೆ 11.30ರ ಸುಮಾರಿಗೆ ಕೆ.ಜಿ.ರೋಡ್ ಪೇಟೆ ಕಡೆಯಿಂದ ಬಂದು ಬ್ರಹ್ಮಾವರ ಕಡೆ ಹೋಗುವ ಬಸ್ ನಿಲ್ದಾಣದತ್ತ ಹೋಗಲು ರಸ್ತೆಯ ಅಂಚಿನಲ್ಲಿ ನಿಂತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬುಲೆರೋ ಜೀಪು ಜಯಲಕ್ಷ್ಮೀ ಭಟ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರು, ಮಣಿಪಾಲ ಆಸ್ಪತ್ರೆಯಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News