ದಂಧೆಕೋರರಿಗೂ ಗುಜರಾತ್ ಪ್ರಿಯವಾಗುವುದೇಕೆ?, ಇದು 'ಗುಜರಾತ್ ಮಾಡೆಲ್' ಪ್ರಭಾವವೇ?: ಕಾಂಗ್ರೆಸ್

Update: 2023-01-13 18:11 GMT

ಬೆಂಗಳೂರು, ಜ.13: ಸರ್ವ ಸಾಕ್ಷಿಗಳನ್ನೂ ನಾಶಪಡಿಸಿದ ನಂತರ ಸರಕಾರದ ಚೀಫ್ ಬ್ರೋಕರ್, ಬಿಜೆಪಿ ಮುಖಂಡ ಸ್ಯಾಂಟ್ರೋ ರವಿಯ ಬಂಧನದ ನಾಟಕ ನಡೆಯುತ್ತಿದೆ. ಸ್ಯಾಂಟ್ರೋ ರವಿಯನ್ನು ಗುಜರಾತಿನಲ್ಲಿ ಬಂಧಿಸಿದ್ದಾರಂತೆ. ಆತ ಗುಜರಾತಿಗೆ ಹೋಗಿದ್ದೇಕೆ? ಎಲ್ಲ ಬಗೆಯ ದಂಧೆಕೋರರಿಗೂ ಗುಜರಾತ್ ಪ್ರಿಯವಾಗುವುದೇಕೆ? ಇದು ಗುಜರಾತ್ ಮಾಡೆಲ್ ಪ್ರಭಾವವೇ? ಎಂದು  ರಾಜ್ಯ ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ''ಸ್ಯಾಂಟ್ರೋ ರವಿಯ ವಿರುದ್ಧ ವರ್ಗಾವಣೆ ದಂಧೆಯ ವಿಚಾರವಾಗಿ ಸರ್ಕಾರ ಇನ್ನೂ ಪ್ರಕರಣ ದಾಖಲಿಸಲಿಲ್ಲ. ಆತನ ಬಂಧನವಾಗಿದ್ದು ಪತ್ನಿಯ ದೂರಿನ ಆಧಾರದಲ್ಲಿ ಹೊರತು ಸರ್ಕಾರದ ದೂರಿನಲ್ಲಿ ಅಲ್ಲ. ಆತನ ಎಲ್ಲಾ ವ್ಯವಹಾರಗಳನ್ನು, ಸರ್ಕಾರ, ಸಚಿವರ ಸಹಬಾಗಿತ್ವವನ್ನು ಲೋಕಾಯುಕ್ತ ಅಥವಾ ನ್ಯಾಯಾಂಗ ತನಿಖೆಗೆ ವಹಿಸಿದಲ್ಲಿ ಮಾತ್ರ ಸತ್ಯ ಹೊರಬರಲು ಸಾಧ್ಯ'' ಎಂದು ಹೇಳಿದೆ. 

Similar News