ವೇದಿಕೆಯಲ್ಲೇ ಸಂಸದೆ ಸುಪ್ರಿಯಾ ಸುಲೆ ಸೀರೆಗೆ ಹತ್ತಿಕೊಂಡ ಬೆಂಕಿ

Update: 2023-01-15 14:33 GMT

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದೆ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಲೆ ಬೆಂಕಿ ಅವಘಡದಿಂದ ಕೂದಲೆಳೆ ಅಂತರದಲ್ಲಿ ಪಾರಾದ್ದಾರೆ. ರವಿವಾರ ಪುಣೆಯ ಹಿಂಜಾವಾಡಿ ಪ್ರದೇಶಕ್ಕೆ ಕರಾಟೆ ಸ್ಪರ್ಧೆಯನ್ನು ಉದ್ಘಾಟಿಸಲು ಆಗಮಿಸಿದ್ದ ಸುಪ್ರಿಯಾ ಅವರ ಸೀರೆಗೆ ಬೆಂಕಿ ತಗುಲಿದೆ. ಇದರಿಂದ ವೇದಿಕೆಯಲ್ಲಿ ಕೆಲ ಕಾಲ ಆತಂಕದ ಸನ್ನಿವೇಶ ಎದುರಾದರೂ, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.  ‌

ಉದ್ಘಾಟನೆ ವೇಳೆ ವೇದಿಕೆ ಮೇಲಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕೆಳಗೆ ಉರಿಯುತ್ತಿದ್ದ ದೀಪದಿಂದ ಸುಪ್ರಿಯಾ ಅವರ ಸೀರೆಗೆ ಬೆಂಕಿ ಹತ್ತಿಕೊಂಡಿದೆ. ಸೀರೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದ ತಕ್ಷಣ ಅವರು ತಡಮಾಡದೆ ತನ್ನ ಕೈಗಳಿಂದ ಬೆಂಕಿಯನ್ನು ನಂದಿಸಿದ್ದಾರೆ.  

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Similar News