ಪಡುಬಿದ್ರಿ: ಅಡ್ವೆ-ನಂದಿಕೂರು ಕಂಬಳೋತ್ಸವಕ್ಕೆ ಚಾಲನೆ

Update: 2023-01-15 14:54 GMT

ಪಡುಬಿದ್ರಿ: ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ನಂದಿಕೂರಿನಲ್ಲಿ ನಡೆದ 30 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವಕ್ಕೆ ಭಟ್ ರವಿವಾರ ಚಾಲನೆ ನೀಡಲಾಯಿತು.  

ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಧ್ವರಾಯ ಉದ್ಘಾಟಿಸಿದರು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ವೈ.ಪ್ರಪುಲ್ಲ ಶೆಟ್ಟಿ. ಅಡ್ವೆ ಮಹಾಗಣಪತಿ ದೇವಸ್ಥಾನದ ಜೆನ್ನಿ ರವಿಶಂಕರ ಭಟ್, ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ದಿನೇಶ್ ಭಟ್, ಅಡ್ವೆ ಗರಡಿ ಮನೆ ರಾಮ ಪೂಜಾರಿ, ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಅಡ್ವೆ ಮೂಡ್ರಗುತ್ತು ಚಿತ್ತರಂಜನ್ ಶೆಟ್ಟಿ, ಅಡ್ವೆ ಮೂಡ್ರಗುತ್ತು ಸುರೇಶ್ ಶೆಟ್ಟಿ, ಅಡ್ವೆ ಕಂಕಣಗುತ್ತು ಅಶ್ರಿತ್ ಹರೀಶ್ ಶೆಟ್ಟಿ, ಕಾರ್ಯಾಧ್ಯಕ್ಷರಾದ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನವೀನಚಂದ್ರ ಸುವರ್ಣ ಅಡ್ವೆ, ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ ಬೆಜ್ಜಬೆಟ್ಟು, ಶಶಿಕುಮಾರ ಶೆಟ್ಟಿ ಸಾಂತೂರು ಬಾಲ್ಕಟ್ಟ ಮನೆ, ಗಣೇಶ್ ನಾರಾಯಣ ದೇವಾಡಿಗ, ಕಾರ್ಯದರ್ಶಿಗಳಾದ ಶಶಿಧರ ಹೆಗ್ಡೆ ಅಡ್ವೆ, ಉದಯ ರೈ ಅರಂತಡೆ, ಕೃಷ್ಣಕುಮಾರ್ ಶೆಟ್ಟಿ ಸನ್ನೋಣಿ, ಕೋಶಾಧಿಕಾರಿಗಳಾದ ಲಕ್ಷ್ಮಣ್ ಎಲ್ ಶೆಟ್ಟಿ ಅರಂತಡೆ, ಗಣೇಶ್ ಶೆಟ್ಟಿ ಸಾಂತೂರು, ಜೊತೆ ಕೋಶಾಧಿಕಾರಿಗಳಾದ ಅಮರನಾಥ ಶೆಟ್ಟಿ ಅಣ್ಣಾಜಿಗೋಳಿ, ಸತೀಶ್ ಶೆಟ್ಟಿ ಅಡ್ವೆ ಮೂಡ್ರಗುತ್ತು, ವಿದ್ಯಾನಂದ ಶೆಟ್ಟಿ ಮುಂಡಶೆಟ್ಟಿ ಮನೆ ಅಡ್ವೆ, ರವೀಂದ್ರ ಪ್ರಭು ಸಾಂತೂರು, ಶೇಖರ ಶೆಟ್ಟಿ, ಪ್ರವೀಣ್ ಕುಮಾರ್ ಗರಡಿ ಮನೆ, ವಿನೋದ್ ಶೆಟ್ಟಿ, ಸುಧಾಮ ಶೆಟ್ಟಿ, ಸರೋಜಾಕ್ಷ ಶೆಟ್ಟಿ, ನಿತಿನ್‍ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.

ಕನೆ ಹಲಗೆ, ಅಡ್ಡ ಹಲಗೆ, ನೇಗಿಲು ಕಿರಿಯ ಮತ್ತು ಹಿರಿಯ, ಹಗ್ಗ ಕಿರಿಯ ಮತ್ತು ಹಿರಿಯ ವಿಭಾಗಗಳಲ್ಲಿ ನೂರಾರು ಜೊತೆ ಕೋಣಗಳು ಸ್ಫರ್ಧೆಯಲ್ಲಿ ಪಾಲ್ಗೊಂಡಿದ್ದವು. 

Similar News