ಉತ್ತರಾಖಂಡ: ಜೋಶಿಮಠ ಭೂಕುಸಿತ, ಜ. 16ರಂದು ಸುಪ್ರೀಂನಿಂದ ಅರ್ಜಿ ವಿಚಾರಣೆ

Update: 2023-01-15 17:53 GMT

ಹೊಸದಿಲ್ಲಿ, ಜ. 15: ಉತ್ತರಾಖಂಡದ ಜೋಶಿಮಠದ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನ್ಯಾಯಾಲಯ ಮಧ್ಯಪ್ರವೇಶಿಸುವಂತೆ ಕೋರಿ ಸಲ್ಲಿಸಲಾದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಜನವರಿ 16ರಂದು ವಿಚಾರಣೆ ನಡೆಸಲಾಗುವ ಪ್ರಕರಣಗಳ ಪಟ್ಟಿಯ ಪ್ರಕಾರ ಜೋಷಿ ಮಠ ಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೋರಿ ಸ್ವಾಮಿ ಅವಿಮುಕ್ತೇಶ್ವರಾನಂದ ಸಲ್ಲಿಸಿದ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಹಾಗೂ ಜೆ.ಬಿ. ಪರ್ದಿವಾಲ ಅವರು ವಿಚಾರಣೆ ನಡೆಸಲಿದ್ದಾರೆ.

Similar News