ಸ್ಯಾಂಟ್ರೊ ರವಿ ಕೇಸ್ ಸಿಐಡಿ ತನಿಖೆಗೆ ಆದೇಶ
Update: 2023-01-16 07:00 GMT
ಬೆಂಗಳೂರು, ಜ.16: ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ.ಎಸ್. ಅಲಿಯಾಸ್ ಸ್ಯಾಂಟ್ರೊ ರವಿ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ.
ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಹಿತಿ ನೀಡಿದ್ದಾರೆ.
ಸ್ಯಾಂಟ್ರೊ ರವಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆತನ ಎರಡನೇ ಪತ್ನಿ ನೀಡಿರುವ ದೂರಿನ ಅನ್ವಯ ಜ.2 ರಂದು ಪ್ರಕರಣ ದಾಖಲಾಗಿತ್ತು. ಸದ್ಯ ಮೈಸೂರಿನ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಡಿಜಿ - ಐಜಿಪಿ ಆದೇಶದ ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸರಿಗ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ವಿಗ್ ತೆಗೆದು, ಮೀಸೆ ಬೋಳಿಸಿಕೊಂಡು ತಲೆ ಮರೆಸಿಕೊಂಡಿದ್ದ ಸ್ಯಾಂಟ್ರೊ ರವಿ: ಪೊಲೀಸರ ಕಾರ್ಯಾಚರಣೆ ಹೇಗಿತ್ತು?