ಬೆಂಗಳೂರು: ರಸ್ತೆ ಅಪಘಾತಕ್ಕೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಬಲಿ

Update: 2023-01-16 07:10 GMT

ಬೆಂಗಳೂರು, ಜ.16: ರಸ್ತೆಯಲ್ಲಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ(Accident) ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ.

ನ್ಯೂಸ್ ಏಜ್ ಹೆರಾಲ್ಡ್ ಪತ್ರಿಕೆಯ ಸಂಪಾದಕ ಎನ್.ಎ.ಚೌಧರಿಯವರ ಪುತ್ರ ಸುಮೀರ್ ಚೌಧರಿ(19) ಮೃತಪಟ್ಟ ಯುವಕ. ಇವರು ನಗರದ ಎ.ಎಂ.ಸಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವಿಭಾಗದಲ್ಲಿ ಮೊದಲನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದರು.

ಸುಮೀರ್ ಚೌಧರಿ ಶನಿವಾರ ಕಾಲೇಜಿನಿಂದ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ವೇಳೆ ನೈಸ್ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗೊಂಡಿದ್ದ ಸುಮೀರ್ ರನ್ನು ಇಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Similar News