ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

Update: 2023-01-17 14:40 GMT

ಮಂಗಳೂರು(Mangaluru): ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಕಂಪನಿಯೊಂದರ  ಉದ್ಯೋಗಿಯೊಬ್ಬರು ಪಡೀಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಮಾರಿಪಳ್ಳ ನಿವಾಸಿ ಸುಜಿತ್ ರಾಜ್ (28) ಎಂಬವರೇ ಮೃತಪಟ್ಟವರು.

ಜ. 16 ರಂದು ರಾತ್ರಿ ಸುಜಿತ್ ರಾಜ್ ಎಂಆರ್‌ಪಿಎನಿಂದ ಕೆಲಸ ಮುಗಿಸಿ ಮಾರಿಪಳ್ಳದ ಮನೆಗೆ ವಾಪಸಾಗುತ್ತಿದ್ದರು. ಅವರು ವಳಚ್ಚಿಲ್ ತಲುಪುತ್ತಿದ್ದಂತೆ  ಅವರ ಬೈಕ್  ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್‌ಗೆ  ಢಿಕ್ಕಿ ಹೊಡೆದ ಪರಿಣಾಮವಾಗಿ ಎಸೆಯಲ್ಪಟ್ಟರು ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕಂಕನಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ| ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿಯ ಬಂಧನ

Similar News