ಉಪ್ಪಿನಂಗಡಿ: ನಾಯಿ ಮರಿಯನ್ನು ಹೊತ್ತೊಯ್ದ ಚಿರತೆ
Update: 2023-01-18 18:29 GMT
ಉಪ್ಪಿನಂಗಡಿ: ಮಧ್ಯಾಹ್ನ ಹೊತ್ತು ಪ್ರತ್ಯಕ್ಷಗೊಂಡ ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ಬುಧವಾರ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.
ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಗಣೇಶ್ ಎಂಬವರ ಮನೆಯ ವರಾಂಡದಲ್ಲಿ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನದ ಪಗ್ ಜಾತಿಯ ನಾಯಿ
ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ.