×
Ad

ಉಡುಪಿ: ಟಿಪ್ಪರ್ -ಸ್ಕೂಟರ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

Update: 2023-01-19 20:24 IST

ಉಡುಪಿ(Udupi): ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಅಂಬಲಪಾಡಿಯ ಅಬ್ದುಲ್ ರಶೀದ್(60) ಎಂದು ಗುರುತಿಸಲಾಗಿದೆ. ಇವರು ಸ್ಕೂಟರ್‌ನಲ್ಲಿ ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಇವರು ಸಮೋಸ ವ್ಯಾಪಾರ ಮಾಡಿಕೊಂಡಿದ್ದರು.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ 18 ದಿನದಲ್ಲಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನ ವಶ

Similar News