ಮುಕ್ಕ ಅಂಜುಮಾನ್ ಶಾಲೆಗೆ ಪ್ರಿಯಾಂಕ್ ಖರ್ಗೆ ಭೇಟಿ

Update: 2023-01-20 10:22 GMT

ಸುರತ್ಕಲ್, ಜ.20: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರೆ ಅವರ ಬೆಳವಣಿಗೆ ಉತ್ತಮವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅವರು ಶುಕ್ರವಾರ ಸುರತ್ಕಲ್ ಸಮೀಪದ ಮುಕ್ಕ ಅಂಜುಮಾನ್ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಮಾತುಕತೆ ನಡೆಸಿ ಶಿಕ್ಷಕರು ಮಕ್ಕಳ ಜೊತೆ ಯಾವ ರೀತಿ ವ್ಯವಹರಿಸಬೇಕು ಎಂದು ಕಿವಿಮಾತು ಹೇಳಿದರು.

ಇಂದಿನ ವಾತಾವರಣವನ್ನು ಗಮನಿಸುವಾಗ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಮೂಡುತ್ತಿದೆ. ನಾವೆಲ್ಲಾ ಶಾಲೆಗೆ ಹೋದ ಬಳಿಕ ಪ್ರಬುದ್ಧರಾಗಿ ಚಿಂತನೆ ಮಾಡಲು ಆರಂಭಿಸಿದ್ದೆವು. ಇದಕ್ಕೆ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಕಡಿಮೆ ಇರುವುದೇ ಕಾರಣ. ಬುದ್ಧ, ಬಸವಣ್ಣರಂತಹ ದಾರ್ಶನಿಕರು ಪ್ರಬುದ್ಧ ಭಾರತ ಬೆಳೆಯಬೇಕೆಂದು ಚಿಂತಿಸಿದ್ದರು. ವೈಜ್ಞಾನಿಕ ಮನೋಭಾವನೆ ಬೆಳೆದರೆ ಪ್ರಬುದ್ಧ ಭಾರತ ಕಟ್ಟಲು ಸಾಧ್ಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಸಂದರ್ಭ ಮಾಜಿ ಶಾಸಕ ಮೊಯ್ದೀನ್‌ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಶರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ಸಿಎಸ್ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.

Similar News