ಭದ್ರಾವತಿ ಉಕ್ಕು ಕಾರ್ಖಾನೆ ಸ್ಥಗಿತಗೊಳಿಸಲು ಕೇಂದ್ರದ ನಿರ್ಧಾರ: ವಿಚಾರ ನಮ್ಮ ಕೈ ಮೀರಿ ಹೋಗಿದೆ ಎಂದ ಬಿಎಸ್ ವೈ
ಶಿವಮೊಗ್ಗ, ಜ.20: ಭದ್ರಾವತಿ ಪಟ್ಟಣದಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್ಎಲ್) ಮುಚ್ಚುವ ನಿರ್ಧಾರ ವಿಚಾರ ನಮ್ಮ ಕೈ ಮೀರಿ ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಖಾನೆ ಸ್ಥಗಿತ ಮಾಡದಂತೆ ನಾವು, ಸಂಸದರು ಬಹಳ ಪ್ರಯತ್ನ ಮಾಡಿದ್ದೇವು. ಆದರೆ ಈ ನಿರ್ಧಾರ ಇಡೀ ದೇಶದಲ್ಲಿ ಕೈಗೊಂಡಿದ್ದಾರೆ. ವಿಐಎಸ್ಎಲ್ ಒಂದೇ ಮುಚ್ಚುತ್ತಿಲ್ಲ. ನಷ್ಟದಲ್ಲಿರುವ ಹಲವು ಕಾರ್ಖಾನೆ ಮುಚ್ಚುತ್ತಿದ್ದಾರೆ. ಅದರಲ್ಲಿ ಭದ್ರಾವತಿಯ ವಿಐಎಸ್ಎಲ್ ಕೂಡ ಒಂದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಜೆ.ಪಿ ನಡ್ಡಾ ಕಾರ್ಯಕ್ರಮ ವಿಚಾರ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರೂ ರಾಜ್ಯಕ್ಕೆ ಭೇಟಿ ನೀಡುತ್ತಾರೆ. ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಿ ಮೋದಿಯವರಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಾತು ಕೊಟ್ಟಿದ್ದೇವೆ. ಕಾರ್ಯಕಾರಿಣಿಯಲ್ಲಿ ನೀಡಿದ ಮಾರ್ಗದರ್ಶನದಂತೆ ನಾವು ಕೆಲಸ ಮಾಡ್ತೇವೆ ಎಂದರು.