VIDEO- BJP ಸಭೆಗೆ ಬಿಎಸ್ ವೈಗಿಲ್ಲ ಆಹ್ವಾನ: ಸಿಎಂ ಬೊಮ್ಮಾಯಿ ಹೇಳಿದ್ದೇನು?

Update: 2023-01-20 14:56 GMT

ಬೆಂಗಳೂರು: 'ಇಂದು ನಡೆದಿದ್ದು ಪ್ರಾಥಮಿಕ ಸಭೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದಿನ ಸಭೆಗೆ ಆಹ್ವಾನ ಕೊಟ್ಟಿರಲಿಲ್ಲ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಬಿಜೆಪಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆಯಾಗಿದೆ, ಮುಂದಿನ ಎರಡು ತಿಂಗಳ ಪಕ್ಷ ಸಂಘಟನೆ, ಚುನಾವಣೆ ಸಿದ್ಧತೆಗೆ ಏನೆಲ್ಲ ಮಾಡಬೇಕು ಎಂದು ಚರ್ಚೆ ನಡೆದಿದೆ ನಾಲ್ಕು ದಿಕ್ಕಿನಿಂದ ಯಾತ್ರೆ ಶುರು ಮಾಡುವ ಬಗ್ಗೆ ಚರ್ಚೆ ಆಗಿದೆ. ಜನಸಂಕಲ್ಪ ಯಾತ್ರೆಯನ್ನು ಫೆಬ್ರವರಿ ಅಂತ್ಯದವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಎಲ್ಲ ಜಿಲ್ಲೆಗಳಿಂದ ಮಾಹಿತಿ ಪಡೆದು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಣಾಳಿಕೆ ಪ್ರಕಟಿಸುವ ಬಗ್ಗೆ ಚರ್ಚೆ ಆಗಿದೆ ಎಂದರು.

Full View

Similar News