ಶಿಕ್ಷಣ ಸಚಿವ ನಾಗೇಶ್‍ ಭೇಟಿ ಮಾಡಿದ ಕೇರಳದ ಶಿಕ್ಷಣ ಸಚಿವ

Update: 2023-01-20 15:37 GMT

ಬೆಂಗಳೂರು: ಜ.20: ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಕೇರಳ ರಾಜ್ಯದ ಶಿಕ್ಷಣ ಮತ್ತು ಕಾರ್ಮಿಕ ಇಲಾಖೆಯ ಸಚಿವ ಶಿವನ್ ಕುಟ್ಟಿ, ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಅವರನ್ನು ಭೇಟಿ ಮಾಡಿ ಉಭಯ ರಾಜ್ಯಗಳ ಶಿಕ್ಷಣ ವ್ಯವಸ್ಥೆಯ ಬಗ್ಗೆ ಸಮಾಲೋಚನೆ ನಡೆಸಿದರು.  

ಶುಕ್ರವಾರ ವಿಧಾನಸೌಧದಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರನ್ನು ಭೇಟಿ ಮಾಡಿದ ಅವರು, ಶಾಲೆಗಳು, ಕೊಠಡಿ ಮತ್ತು ಮೂಲಸೌಕರ್ಯಗಳು, ಶಿಕ್ಷಣದ ಗುಣಮಟ್ಟ, ಸ್ಮಾರ್ಟ್‍ಕ್ಲಾಸ್, ಆನ್‍ಲೈನ್ ಕ್ಲಾಸ್, ಶಿಕ್ಷಕರು, ಪರೀಕ್ಷಾ ಪದ್ಧತಿ, ನೇಮಕಾತಿ, ಮಧ್ಯಾಹ್ನದ ಬಿಸಿಯೂಟ ವಿತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಚಿವರು ವಿಚಾರ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತ ಆರ್.ವಿಶಾಲ್, ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ನಿರ್ದೇಶಕ ಬಿ.ಬಿ.ಕಾವೇರಿ ಹಾಗೂ ಕೇರಳ ರಾಜ್ಯದ ಶಿಕ್ಷಣ ಇಲಾಖೆಯ ನಿರ್ದೇಶಕ ಜೀವನ್ ಬಾಬು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Similar News