ತಿ.ನರಸೀಪುರ: ಚಿರತೆ ದಾಳಿಗೆ ಬಾಲಕ ಬಲಿ

Update: 2023-01-22 06:15 GMT

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರಿದಿದ್ದು. ಬಾಲಕನೋರ್ವನನ್ನು ಚಿರತೆ ಹೊತ್ತೊಯ್ದು ಕೊಂದು ಹಾಕಿರುವ ಘಟನೆ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.  

ಹೊರಳಹಳ್ಳಿ ಗ್ರಾಮದ ಜಯಂತ್ (11) ಮೃತ ಬಾಲಕ. ಬಾಲಕನಿಗಾಗಿ ಗ್ರಾಮಸ್ಥರು ರಾತ್ರಿಯಿಡೀ ಹುಡುಕಾಟ ನಡೆಸಿದ್ದರೂ ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಘಟನಾ ಸ್ಥಳದಿಂದ 1 ಕಿಮೀ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶುಕ್ರವಾರ  ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಎಂಬ 60 ವರ್ಷದ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದರು. 

ಇನ್ನು ತಾಲೂಕಿನಲ್ಲಿ ಜನರಲ್ಲಿ ಆತಂಕ  ಮನೆ ಮಾಡಿದ್ದು, ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ:

ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು, ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Similar News