ಬೆಂಗಳೂರು | ಸರಗಳ್ಳತನ ಪ್ರಕರಣ: ಜಿಮ್ ತರಬೇತುದಾರನ ಬಂಧನ

Update: 2023-01-22 06:41 GMT

ಬೆಂಗಳೂರು, ಜ.21: ವೃದ್ಧೆಯಿಂದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಜಿಮ್ ಟ್ರೈನರ್ ನನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಮಂಜುನಾಥ್ ಬಂಧಿತ ಆರೋಪಿಯಾಗಿದ್ದು, ಆತನಿಂದ 2.20 ಲಕ್ಷ ಮೌಲ್ಯದ ಮಾಂಗಲ್ಯ ಸರ ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ. 

ಡಿ.4 ರಂದು ಪೂರ್ಣಪ್ರಜ್ಞಾ ಬಡಾವಣೆಯಲ್ಲಿ ರುಕ್ಮಿಣಿ ಎಂಬ ವೃದ್ಧೆಯ 44.7 ಗ್ರಾಂ. ತೂಕದ ಮಾಂಗಲ್ಯ ಸರವನ್ನು ಕಳವು ಮಾಡಿ ಆರೋಪಿ ಪರಾರಿಯಾಗಿದ್ದ. ಇನ್ನೂ, ಈತ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದು, ವೇತನ ಸಾಲದೇ ಮೊದಲ ಬಾರಿಗೆ ಸರಗಳ್ಳತನದ ಹಾದಿ ಹಿಡಿದಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದರು.

Similar News