ಮುಂದಿನ ಚುನಾವಣೆಯಲ್ಲಿ ಬಿಲ್ಲವ ಸಮುದಾಯದ ಯುವಕರಿಗೆ ಅವಕಾಶ ನೀಡಿ: ಬಿ.ಜನಾರ್ಧನ ಪೂಜಾರಿ

Update: 2023-01-22 07:10 GMT

ಬೆಳ್ತಂಗಡಿ: ಮುಂದಿನ ಚುನಾವಣೆಯಲ್ಲಿ ಬಿಲ್ಲವ ಸಮುದಾಯದ ಯುವಕರಿಗೆ ಅವಕಾಶ ನೀಡಿ ಎಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಕರೆ ನೀಡಿದ್ದಾರೆ

ಬೆಳ್ತಂಗಡಿಯ ಗುರುದೇವ ಕಾಲೇಜಿನ ಆವರಣದಲ್ಲಿ  ಶ್ರೀ ಗುರುನಾರಾಯಣ ಸ್ವಾಮಿ ಸೆವಾ ಸಂಘ ಬೆಳ್ತಂಗಡಿ ಹಾಗೂವಸಹ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬಿಲ್ಲವ ಜನಪದ ಸಮ್ಮೇಳನ ಜೀಟಿಗೆ ಇದರ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಬೆಳ್ತಂಗಡಿಯಲ್ಲಿ ವಸಂತ ಬಂಗೇರರಂತಹ ಹಿರಿಯರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ರಕ್ಷಿತ್ ಶಿವರಾಂ, ಪದ್ಮರಾಜರು, ಸಂಪತ್ ಸುವರ್ಣರಂತಹ ಯುವಕರಿಗೆ ಅವಕಾಶ ನೀಡಲಿ ಎಂದು ಕರೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ ವಸಂತ ಬಂಗೇರ, ಶ್ರೀ ಗುತುನಾರಾಯಣ ಸ್ವಾಮಿ ಸೇವಾ ಸಂಘ ದ ಆಧ್ಯಕ್ಷ ಚಿದಾನಂದ ಪೂಜಾರಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು

Similar News