ಎಸ್.ಎಲ್.ಕೆರೂರ್ ನಿಧನ

Update: 2023-01-22 17:34 GMT

ಉಡುಪಿ, ಜ.22: ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ  ವಿದ್ಯಾರ್ಥಿಗಳ ಅತ್ಯಂತ ಪ್ರೀತಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಪ್ರೊ. ಎಸ್.ಎಲ್.ಕೆರೂರ್ (86) ರವಿವಾರ  ಬೆಂಗಳೂರಿನಲ್ಲಿ ನಿಧನರಗಿದ್ದಾರೆ. 

ಕೆರೂರ್ ಅವರು ಓರ್ವ ಪುತ್ರಿ ಹಾಗೂ ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಹಳೆ ವಿದ್ಯಾರ್ಥಿಗಳು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Similar News

ವಸಂತಿ