ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ: ಇಬ್ಬರು ಮೃತ್ಯು

Update: 2023-01-23 16:07 GMT

ಬೆಂಗಳೂರು, ಜ. 23: ನಗರ ವ್ಯಾಪ್ತಿಯಲ್ಲಿ ನಡೆದ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಎಚ್‍ಎಸ್‍ಆರ್ ಲೇಔಟ್ ದೊಡ್ಡ ಕನ್ನಳ್ಳಿಯ ಎನ್‍ಇಟಿ ಕಾಲೇಜು ಕಾಲೇಜು ಮುಖ್ಯ ರಸ್ತೆಯಲ್ಲಿ ರವಿವಾರ ರಾತ್ರಿ ಅಪರಿಚಿತ ವಾಹನ ಹರಿದು ರಸ್ತೆ ದಾಟುತ್ತಿದ್ದ ದೊಡ್ಡಕನ್ನಳ್ಳಿಯ ವಿಶ್ವನಾಥ್ ಗೌಡ(42) ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಎಚ್‍ಎಸ್‍ಆರ್ ಲೇಔಟ್ ಸಂಚಾರ ಪೆÇಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತೊಂದು ಪ್ರಕರಣ: ಬಾಣಸವಾಡಿಯ ಹೊರಮಾವು ಲೇಕ್ ಮುಖ್ಯರಸ್ತೆಯ ಬಳಿ ನಿನ್ನೆ ರಾತ್ರಿ 11.30ರ ವೇಳೆ ಗ್ಯಾಸ್ ಸಿಲಿಂಡರ್ ಲಾರಿ ಬೈಕ್‍ಗೆ ಢಿಕ್ಕಿ ಹೊಡೆದು ಸವಾರ ಹೊನ್ನಪ್ಪ(22) ಮೃತಪಟ್ಟಿದ್ದಾರೆ. ಯಾದಗಿರಿ ಮೂಲದ ಹೊನ್ನಪ್ಪ ನಗರದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸಮಾಡುತ್ತಿದ್ದು, ಪ್ರಕರಣ ದಾಖಲಿಸಿರುವ ಬಾಣಸವಾಡಿ ಸಂಚಾರ ಪೊಲೀಸರು ಗ್ಯಾಸ್ ಸಿಲಿಂಡರ್ ಲಾರಿ ಚಾಲಕನನ್ನು ಬಂಧಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

Similar News