×
Ad

ಮಣಿಪಾಲ: ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ

Update: 2023-01-25 11:11 IST

ಉಡುಪಿ, ಜ.24: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದು ನಸುಕಿನ ವೇಳೆ ಇಂದ್ರಾಳಿ ರೈಲ್ವೆ ಸೇತುವೆ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ಸಂಜೀವ ಹೆಗ್ಡೆ ಎಂಬವರ ಪುತ್ರ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ.

ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂಬ ಉಲ್ಲೇಖ ಹಾಗೂ ಮೃತರ ಕಿಸೆಯಲ್ಲಿ ಆಧಾರ್ ಕಾರ್ಡ್ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದ್ದು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಮೃತದೇಹವನ್ನು ಸಾಗಿಸಲು ನೆರವಾದರು.

Similar News