ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಭೇಟಿ
Update: 2023-01-25 10:28 GMT
ಮಂಗಳೂರು, ಜ.25: ಐದು ಜಿಲ್ಲೆ ಗಳ ರಾಜ್ಯ, ಜಿಲ್ಲಾ, ಬ್ಲಾಕ್ ಪದಾಧಿಕಾರಿಗಳನ್ನು ಭೇಟಿಯಾಗಲು ಮಂಗಳೂರಿಗೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ, ರಾಜ್ಯಸಭಾ ಸದಸ್ಯ ರಣದೀಪ್ ಸಿಂಗ್ ಸುರ್ಜೇವಾಲ ರನ್ನು ಸುಳ್ಯ ಕಾಂಗ್ರೆಸ್ ನಿಯೋಗವು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿತು.
ಈ ಸಂದರ್ಭ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ,ಸಿ,ಜಯರಾಮ, ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ.ಶಹೀದ್, ಕೆಪಿಸಿಸಿ ಸಂಯೋಜಕ ಎಂ.ವೆಂಕಪ್ಪ ಗೌಡ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ, ನಂದಕುಮಾರ್ ಡಾ.ರಘು, ಪಕ್ಷದ ಧುರೀಣರುಗಳಾದ ಪ್ರಹ್ಲಾದ್ ಮೊದಲಾದವರು ಉಪಸ್ಥಿತರಿದ್ದರು.