ಈ ಬಾರಿ ಗಾಂಧಿ ಬೇಕಾ, ಕೊಲೆಗಾರ ಗೋಡ್ಸೆ ಬೇಕಾ ಎಂದು ನಿರ್ಧರಿಸುವ ಚುನಾವಣೆ: ಬಿ.ಕೆ ಹರಿಪ್ರಸಾದ್

Update: 2023-01-26 13:32 GMT

ಮೈಸೂರು: 'ಮುಂಬರಲಿರುವ ವಿಧಾನ ಸಭಾ ಚುನಾವಣೆ ಅಹಿಂಸೆ ಮತ್ತು ಹಿಂಸೆಯ ನಡುವಿನ ಚುನಾವಣೆ. ಅಹಿಂಸೆ ಸಾರಿದ ಗಾಂಧಿ ಬೇಕಾ,  ಅವರನ್ನು ಕೊಂದ ಗೋಡ್ಸೆ ಬೇಕಾ? ಎಂದು ತೀರ್ಮಾನಿಸುವ ಚುನಾವಣೆ' ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಧ್ಯಕ್ಷರು ಈಗಾಗಲೇ ಹೇಳಿದ್ದಾರೆ, ''ರಸ್ತೆ ಅಭಿವೃದ್ಧಿ ವಿಚಾರ ಬೇಕಿಲ್ಲ ಏನಿದ್ದರೂ ಲವ್ ಜಿಹಾದ್ ಧರ್ಮದ ವಿಚಾರದ ಚುನಾವಣೆ'' ಅಂತ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ' ಎಂದರು.

ಮುಸ್ಲಿಮರ ಜೊತೆ ವಿಶ್ವಾಸದ ಹೆಜ್ಜೆ ಇಡುವಂತೆ  ಪ್ರಧಾನಿ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 'ಇದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ. ಚುನಾವಣೆ ಹಿನ್ನೆಲೆಯಲ್ಲಿ ಇದು ಮೋದಿಯವರ ಮೊಸಳೆ ಕಣ್ಣೀರಿನಂತಿದೆ' ಎಂದು ಟೀಕಿಸಿದರು. 

Full View

Similar News