ರಾಯಚೂರು: ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದ ಯುವಕ ಮೃತ್ಯು

Update: 2023-01-26 18:05 GMT

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೋಲಾಟ ನೃತ್ಯ ಪ್ರದರ್ಶಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ. 

ಮಹಾಂತೇಶ ಪೂಜಾರ (40) ಮೃತ ಯುವಕ ಎಂದು ಗುರುತಿಸಲಾಗಿದೆ. ಆರೋಗ್ಯ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಯಾಗಿರುವ ಇವರು ಗುರುವಾರ ಸಿಂಧನೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ತಂಡದ ಜತೆ ನೃತ್ಯ ಮಾಡುತ್ತಿದ್ದಾಗ ಮಹಾಂತೇಶ್ ಏಕಾಏಕಿ ಕುಸಿದುಬಿದ್ದಿದ್ದರೆನ್ನಲಾಗಿದ್ದು, ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.  

ಇದನ್ನೂ ಓದಿ: ರಾಮನಗರ: ಚಿರತೆಯಿಂದ ತಪ್ಪಿಸಿಕೊಳ್ಳಲು ಮರವೇರಿದ ಯುವತಿ; ಆಯ ತಪ್ಪಿ ಬಿದ್ದು ಗಂಭೀರ ಗಾಯ

Similar News