ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2023-01-27 06:11 GMT

ಬಂಟ್ವಾಳ, ಜ. 26: ಇಲ್ಲಿಗೆ ಸಮೀಪದ ಕಲ್ಲಡ್ಕ, ಗೋಳ್ತಮಜಲುವಿನಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 74ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲೆ ಹೇಮಲತಾ ಬಿ.ಡಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಾವು ಸಂವಿಧಾನದ ಮೂಲಭೂತ ಹಕ್ಕುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾ ಮಾನವೀಯತೆ, ಪ್ರೀತಿ, ವಿಶ್ವಾಸದೊಂದಿಗೆ ನಮ್ಮ ರಾಷ್ಟ್ರವನ್ನು ಬಲಿಷ್ಠಗೊಳಿಸಿಕೊಳ್ಳಬೇಕು. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆರಿಸಿಕೊಳ್ಳಬಹುದು ಎಂದು ಹೇಳಿದರು.                           

ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ  ಅಶ್ವಿನಿ.ಎ ಅವರು  ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಲಹಾ ಸಮಿತಿಯ ಕಾರ್ಯದರ್ಶಿ ಮಮಿತಾ ಎಸ್. ರೈ ಹಾಗೂ ಸದಸ್ಯರು ಬೋಧಕ  ಮತ್ತು ಬೋಧಕೇತರ ವೃಂದದವರು, ಭಾಗವಹಿಸಿದ್ದರು.

ಮೌಲ್ಯ ಶಿಕ್ಷಣ ವಿಭಾಗದ ಉಪನ್ಯಾಸಕಿ ಸಪೂರತ್ ಅವರ ಕಿರಾಅತ್ ಪಠಿಸಿದರು. ಹಿಂದಿ ಉಪನ್ಯಾಸಕಿ ಶ್ರುತಿ ಸ್ವಾಗತಿಸಿ, ವಂದಿಸಿದರು.

Similar News