ಬಂಟ್ವಾಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇಸಪ್ಪ ಕೋಟ್ಯಾನ್ ನಿಧನ

Update: 2023-01-27 09:33 GMT

ಬಂಟ್ವಾಳ, ಜ.27: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಧಾರ್ಮಿಕ, ಸಾಮಾಜಿಕ ಧುರೀಣ ಪಚ್ಚಿನಡ್ಕ ನಿವಾಸಿ ಕೆ.ಸೇಸಪ್ಪ ಕೋಟ್ಯಾನ್ (75) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ವೇಳೆಗೆ ನಿಧನರಾಗಿದ್ದಾರೆ.

ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ ವೇಳೆ ಇವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅಲ್ಲಿಯೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಜ. 26ರಂದು ಅವರು ಚಿಕಿತ್ಸೆಗೆ ಸ್ಪಂದಿಸಿದೆ ಸಂಜೆ ವೇಳೆ ಮೃತಪಟ್ಟಿರುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಬಂಟ್ವಾಳದಲ್ಲಿ ಯಶಸ್ವಿ ಉದ್ಯಮಿ ಎಂಬ ಹೆಗ್ಗಳಿಕೆ ಗೆ ಪಾತ್ರವಾಗಿದ್ದ ಇವರು ಶುಭ ಬೀಡಿ, ಶುಭ ಟ್ರಾವೆಲ್ಸ್, ಶುಭಲಕ್ಮೀ ಕಲ್ಯಾಣ ಮಂಟಪ ಸಹಿತ ಅನೇಕ ಉದ್ಯಮ ನಡೆಸುತ್ತಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಪಡೆದಿದ್ದರು. ಇವರು ಧಾರ್ಮಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅನನ್ಯವಾಗಿದ್ದು, ಅನೇಕ ದೈವ, ದೇವಸ್ಥಾನಗಳ ಜೀರ್ಣೋದ್ಧಾರ ಇವರ ಮೂಲಕ ನಡೆದಿವೆ. ಬಂಟ್ವಾಳ ‌ಪೋಲೀಸ್ ಲೈನ್ ನ ದೇವಸ್ಥಾನದ ಅಧ್ಯಕ್ಷ ರಾಗಿದ್ದ ಇವರು ಕಳೆದ 25 ವರ್ಷಗಳಿಂದ ಬಂಟ್ವಾಳ ಬಿಲ್ಲವ ಸಂಘದ ಯಶಸ್ವಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಮದುವೆಯಾಗಿ ಐವತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇತ್ತೀಚಿಗೆ ಮನೆಯಲ್ಲಿ ಶುಭಯಾನ ಎಂಬ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿದ್ದರು. ಮೃತರು ಪತ್ನಿ, ಪುತ್ರ ಭುವನೇಶ್ ಪಚ್ಚಿನಡ್ಕ ಸಹಿತ ನಾಲ್ವರು ಪುತ್ರಿಯರು  ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Similar News