ದೊಡ್ಡಬಳ್ಳಾಪುರ | ನಗರಸಭೆ ಬಿಜೆಪಿ ದಲಿತ ಸದಸ್ಯನ ಮೇಲೆ ಸ್ವಪಕ್ಷದ ಮುಖಂಡರಿಂದಲೇ ಹಲ್ಲೆ ಆರೋಪ; FIR ದಾಖಲು

Update: 2023-01-28 06:42 GMT

ದೊಡ್ಡಬಳ್ಳಾಪುರ: ನಗರಸಭೆಯ ಬಿಜೆಪಿ ದಲಿತ ಸದಸ್ಯನ ಮೇಲೆ ಬಿಜೆಪಿಯ ಮೇಲ್ಜಾತಿಯ ಮುಖಂಡರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಘಟನೆ ಕುರಿತು ಹಲ್ಲೆಗೊಳಗಾದ ನಗರ ಸಭೆ ಸದಸ್ಯ ಆರ್​ ಶಿವಣ್ಣ, ಬಿಜೆಪಿ ಮುಖಂಡರ ವಿರುದ್ಧ ನೀಡಿರುವ ದೂರಿನನ್ವಯ ದೊಡ್ಡಬಳ್ಳಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಜನ ಸೇರದಿದ್ದಕ್ಕೆ ಬಿಜೆಪಿಯ ಮುಖಂಡರು ಪಕ್ಷದ ಕಚೇರಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ದಲಿತ ಸಮುದಾಯದ ನಗರಸಭಾ ಸದಸ್ಯ ಆರ್​ ಶಿವಣ್ಣ ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾಗ ಗಲಾಟೆ ಉಂಟಾಗಿದೆ ಎನ್ನಲಾಗಿದೆ. ಈ ವೇಳೆ ಬಿಜೆಪಿಯ ಮುಖಂಡರು ಜಾತಿ ನಿಂದನೆ ಮಾಡಿದ್ದಲ್ಲದೇ ಅವರ ಅಂಗಿ ಹರಿದು ಹಾಕಿ, ಒದ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. 

Similar News