ಮದ್ದೂರು: ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಮೃತ್ಯು

Update: 2023-01-28 10:00 GMT

ಮಂಡ್ಯ, ಜ.28: ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತರೊಬ್ಬರು  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. 

ಮೃತ ರೈತರನ್ನು ಕೊಪ್ಪಲು ಗ್ರಾಮದ ಕರೀಗೌಡ(60) ಎಂದು ಗುರುತಿಸಲಾಗಿದೆ. ಜಮೀನಿಗೆ ವಿದ್ಯುತ್ ಪರಿವರ್ತಕ ಅಳವಡಿಸಿಕೊಡುವುದಾಗಿ ರಾತ್ರಿ ವೇಳೆ ಇವರನ್ನು ಸೆಸ್ಕ್ ಸಿಬ್ಬಂದಿಗಳು ಕರೆದೊಯ್ದಿದ್ದರು. ಕತ್ತಲೆಯಲ್ಲಿ ಟಿಸಿ ಅಳವಡಿಸುತ್ತಿರುವಾಗ ತಲೆ ಮೇಲೆ ಕಬ್ಬಿಣದ ಕಂಬ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.

ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News