ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯ ಅಸಹಜ ಸಾವು

Update: 2023-01-28 10:02 GMT

ಬೆಳ್ತಂಗಡಿ, ಜ.28: ಶಾಲಾ ವಿದ್ಯಾರ್ಥಿನಿಯೊಬ್ಬಳು ಅಸಹಜ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಶನಿವಾರ ಗೇರುಕಟ್ಟೆಯಲ್ಲಿ ಸಂಭವಿಸಿದೆ.

ಕುಪ್ಪೆಟ್ಟಿ ನಿವಾಸಿ ಅಬ್ದುರ್ರಝಾಕ್ ಎಂಬವರ ಪುತ್ರಿ ಆಸಿಫಾ(16) ಮೃತಪಟ್ಟ ಬಾಲಕಿ. ಈಕೆ ಗೇರುಕಟ್ಟೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿದ್ದಳು.

ಇಂದು ಬೆಳಗ್ಗೆ ಗೇರುಕಟ್ಟೆ ಬಸ್ ನಿಲ್ದಾಣದಿಂದ ಬಸ್ಸಿನಿಂದ ಇಳಿದು ಶಾಲೆಗೆಂದು ತೆರಳುತ್ತಿದ್ದ ಆಸಿಫಾ ಅಲ್ಲೇ ಸಮೀಪದ ಮನೆಯೊಂದಕ್ಕೆ ತೆರಳಿ ಶೌಚಾಲಯಕ್ಕೆ ಹೋಗಿದ್ದಾಳೆನ್ನಲಾಗಿದೆ. ತುಂಬಾ ಹೊತ್ತಾದರೂ ಶೌಚಾಲಯಕ್ಕೆ ಹೋದವಳು ಹೊರಬರಲಿಲ್ಲ ಎನ್ನಲಾಗಿದೆ. ಮನೆಯವರು ಕರೆದರೂ ಯಾವುದೇ ಉತ್ತರ ಬಾರದಿದ್ದಾಗ ಅವರು ಶಾಲೆಯವರಿಗೆ, ಸ್ಥಳೀಯ ಗ್ರಾ‌ಪಂ ಸದಸ್ಯ ಅಬ್ದುಲ್ ಕರೀಂ ಎಂಬವರಿಗೆ ಮಾಹಿತಿ ನೀಡಿದ್ದಾರೆ, ಶೌಚಾಲಯದ ಬಾಗಿಲು ಮುರಿದು ನೋಡಿದಾಗ ವಿದ್ಯಾರ್ಥಿನಿ ನರಳಾಡುತ್ತಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸಲಾಗುತ್ತಿದೆ.  

Similar News