ಭವಾನಿ ರೇವಣ್ಣರನ್ನು ಬಿಜೆಪಿಗೆ ಆಹ್ವಾನ ಮಾಡಿದ್ದು ತಮಾಷೆಗೆ, ಟಿಕೆಟ್ ಕೇಳಬೇಡಿ...: ಸಿ.ಟಿ.ರವಿ

Update: 2023-01-28 11:47 GMT

ಬೆಂಗಳೂರು: 'ಭವಾನಿ ರೇವಣ್ಣ ಅವರನ್ನು ಬಿಜೆಪಿಗೆ ಆಹ್ವಾನ ಮಾಡಿದ್ದು ತಮಾಷೆಗೆ, ಅದನ್ನೇ ಗಂಭೀರವಾಗಿ ಪರಿಗಣಿಸಬಾರದು' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಇಂದು ನಗರದಲ್ಲಿ  ಸುದ್ದಿಗೋಷ್ಠಿ  ನಡೆಸಿ ಮಾತನಾಡಿದ ಸಿ.ಟಿ ರವಿ,  ''ನೀವೇ ಹೇಳಿದ್ದೀರಿ ಎಂದು ಬಿಜೆಪಿಗೆ ಬಂದು ಟಿಕೆಟ್ ಕೇಳಬೇಡಿ. ನನ್ನ ಬಗ್ಗೆ ಆಕ್ರೋಶ ಭಾವನೆ ಬೇಡ, ನಾನು ಜೆಡಿಎಸ್ ಹೈಕಮಾಂಡ್ ಅಲ್ಲ. ದಯವಿಟ್ಟು ಅದನ್ನು ಯಾರು ಗಂಭೀರವಾಗಿ ಪರಿಗಣಿಸಬಾರದು' ಎಂದು ಸ್ಪಷ್ಟಪಡಿಸಿದ್ದಾರೆ.

'ಜೆಡಿಎಸ್​ ಹೈಕಮಾಂಡ್ ಅವರ ಮನೆಯಲ್ಲೇ ಇದ್ದಾರೆ. ಅವರದ್ದು ಮನೆ ಜಗಳ ಅಂತಾ ನಾನು ಹೇಳಿದರೆ ತಪ್ಪಾಗುತ್ತದೆ' ಎಂದರು.  

ಇದನ್ನೂ ಓದಿಸಿದ್ದರಾಮಯ್ಯ ಯಾದಗಿರಿಯಲ್ಲಿ ಸ್ಪರ್ಧಿಸಿದರೆ 1 ಕೋಟಿ ರೂ. ನೀಡುವೆ ಎಂದ BJP ಮುಖಂಡ

ಭವಾನಿಗೆ ಹಾಸನ ಸುರಕ್ಷಿತ ಕ್ಷೇತ್ರ ಅಲ್ಲ:  ಹಾಸನ ಕ್ಷೇತ್ರದಲ್ಲಿ ಪ್ರೀತಂಗೌಡ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಪ್ರೀತಂಗೌಡ ಜನಪ್ರಿಯತೆ ಹೆಚ್ಚಾಗಿದೆ, ಜನ ಪ್ರೀತಂಗೌಡ ಪರವಿದ್ದಾರೆ. ಜೆಡಿಎಸ್​ನಿಂದ ಯಾರೇ ಅಭ್ಯರ್ಥಿ ಕಣಕ್ಕಿಳಿದರೂ ಪ್ರೀತಂಗೌಡ ಗೆಲ್ಲುತ್ತಾರೆ. ಹೀಗಾಗಿ ಭವಾನಿ ಅಕ್ಕಗೆ ಹಾಸನ ಸುರಕ್ಷಿತ ಕ್ಷೇತ್ರ ಅಲ್ಲ ಎಂದರು.

''ನನ್ನ ಮನಸ್ಸಿನಲ್ಲಿ ಭವಾನಿ ರೇವಣ್ಣ ಅವರು ನಮ್ಮ ಪಾರ್ಟಿಯಿಂದ ಅಭ್ಯರ್ಥಿಯಾಗಬೇಕೆಂದು ಅನಿಸಿತ್ತು. ಭವಾನಿ ರೇವಣ್ಣ  ಹೊಳೆನರಸೀಪುರಕ್ಕೆ ನಮ್ಮ ಪಕ್ಷದ ಅಭ್ಯರ್ಥಿಯಾಗಲಿ. ಭವಾನಿಗಿಂತ ಉತ್ತಮ ಅಭ್ಯರ್ಥಿ ಹೊಳೆನರಸೀಪುರಕ್ಕೆ ಬೇರೋಬ್ಬರಿಲ್ಲ'' ಎಂದು ಸಿ.ಟಿ ರವಿ ಅವರು ಶುಕ್ರವಾರ ಹೇಳಿಕೆ ನೀಡಿದ್ದರು. 

ಇದನ್ನೂ ಓದಿ: ಭವಾನಿ ರೇವಣ್ಣ ಅಭ್ಯರ್ಥಿಯಾದರೆ ಹಾಸನದಲ್ಲಿ ಗೆಲುವು ಖಚಿತ, ಬರೆದಿಟ್ಟುಕೊಳ್ಳಿ ಎಂದ ಸೂರಜ್‌ ರೇವಣ್ಣ

Similar News