ಕೇವಲ 8 ವರ್ಷಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ: ಕೇಂದ್ರ ಗೃಹ ಸಚಿವ ಅಮಿತ್ ಶಾ

Update: 2023-01-28 14:05 GMT

ಹುಬ್ಬಳ್ಳಿ, ಜ. 28: ತಂತ್ರಜ್ಞಾನದಲ್ಲಿ ಭಾರತ ದೇಶವು ನಂಬರ್ ಓನ್ ಸ್ಥಾನಕ್ಕೇರಬೇಕು. ಅದು ವಿದ್ಯಾರ್ಥಿಗಳ ಕೈಯಲ್ಲಿದ್ದು, ಅವರು ಆ ನಿಟ್ಟಿನಲ್ಲಿ ಶ್ರಮಿಸಲು ಸಂಕಲ್ಪ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

ಶನಿವಾರ ನಗರದ ಕೆಎಲ್‍ಇ ಸಂಸ್ಥೆಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿವಿಬಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನ ಸೌಭಾಗ್ಯ. ಈ ಸಂಸ್ಥೆ ಹಲವು ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದೆ. ಕೆಎಲ್‍ಇ ಸಂಸ್ಥೆಯನ್ನ ನಿಸ್ವಾರ್ಥತೆಯಿಂದ ಸ್ಥಾಪಿಸಲಾಗಿದೆ ಎಂದು ನುಡಿದರು.

ವಿಶ್ವದ ಎದುರು ಭಾರತವನ್ನ ನಾಯಕ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಇಡಿ ವಿಶ್ವಕ್ಕೆ ಭಾರತದ ಶಕ್ತಿ ತೋರಿಸಬೇಕಿದೆ. ಭಾರತದ ಕನಸನ್ನ ಯುವಜನತೆ ನನಸು ಮಾಡಬೇಕು. ಸ್ವಾತಂತ್ರ ಹೋರಾಟಗಾರರ ಕನಸು ನನಸು ಮಾಡಬೇಕಿದೆ. 2014ರಲ್ಲಿ ಮಹತ್ವದ ಪರಿವರ್ತನೆಯಾಯಿತು. ಕೇವಲ 8 ವರ್ಷಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯಾಗಿದೆ ಎಂದು ಅವರು ತಿಳಿಸಿದರು.

Similar News