ಟಿಕೆಟ್ ಕೈತಪ್ಪಿದವರಿಗೆ ಮುಂದಿನ ದಿನಗಳಲ್ಲಿ ಎಂಎಲ್ಸಿ, ನಿಗಮ ಮಂಡಳಿ: ಡಿ.ಕೆ. ಶಿವಕುಮಾರ್‌

Update: 2023-01-28 14:56 GMT

ಯಾದಗಿರಿ, ಜ. 28: ‘ಟಿಕೆಟ್ ಸಿಗದವರಿಗೆ ಪಕ್ಷ ಮುಂದಿನ ದಿನಗಳಲ್ಲಿ ಎಂಎಲ್ಸಿ, ನಿಗಮ ಮಂಡಳಿ ಮುಖ್ಯಸ್ಥರನ್ನಾಗಿ ಮಾಡಿ ಅಧಿಕಾರ ನೀಡಲಾಗುವುದು. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಈ ವಿಚಾರವಾಗಿ ನೀವೆಲ್ಲರೂ ಪ್ರತಿಜ್ಞೆ ಮಾಡಬೇಕು’ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. 

ಶನಿವಾರ ಯಾದಗಿರಿ ಪಕ್ಷದಿಂದ ಏರ್ಪಡಿಸಿದ್ದ ‘ಪ್ರಜಾಧ್ವನಿ ಯಾತ್ರೆ’ ಸಮಾವೇಶದಲ್ಲಿ ಮಾತನಾಡಿದ ಅವರು,  ‘ಬಿಜೆಪಿ ಸರಕಾರದ 3 ವರ್ಷಗಳ ದುರಾಡಳಿತ, ಅಕ್ರಮ, ಹಗರಣ, ಭ್ರಷ್ಟಾಚಾರದ ಬಗ್ಗೆ ‘ಬಿಜೆಪಿ ಪಾಪದ ಪುರಾಣ’ ಎಂಬ ಪುಸ್ತಕ ಬಿಡುಗಡೆ ಮಾಡಿದ್ದೇವೆ. ಇದನ್ನು ಪ್ರತಿ ಮನೆಗೆ ತಲುಪಿಸಿ ಜನರಲ್ಲಿ ಅರಿವು ಮೂಡಿಸಬೇಕು. ನಾನು ಹಾಗೂ ಸಿದ್ದರಾಮಯ್ಯ ನಿಮ್ಮ ತಾಲೂಕುಗಳಿಗೆ ಆಗಮಿಸುತ್ತೇವೆ. ನಾವೆಲ್ಲರೂ ಸೇರಿ ಪಕ್ಷವನ್ನು ಗೆಲ್ಲಿಸೋಣ ಎಂದು ಅವರು ಮನವಿ ಮಾಡಿದರು.

ಬಿಜೆಪಿ ಕೊಡುಗೆ ಏನು?: ‘ಜಾತಿ ಜಾತಿಗಳ ನಡುವೆ ದ್ವೇಷವೆಂಬ ವಿಷ, ಧರ್ಮಗಳ ನಡುವೆ ದ್ವೇಷ ಬಿತ್ತಿದರು. ಅವರು ಹಿಂದೂಗಳು ಮಾತ್ರ ಮುಂದು ಎನ್ನುತ್ತಾರೆ. ಆದರೆ ಕಾಂಗ್ರೆಸ್ ಪಕ್ಷ ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ದಲಿತ, ಲಿಂಗಾಯತ, ಒಕ್ಕಲಿಗ ಎಲ್ಲರೂ ಒಂದು ಎನ್ನುತ್ತದೆ. ಇದು ಕಾಂಗ್ರೆಸ್ ಹಾಗೂ ಬಿಜೆಪಿಗೂ ಇರುವ ವ್ಯತ್ಯಾಸ’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

ಇದನ್ನೂ ಓದಿಭವಾನಿ ರೇವಣ್ಣರನ್ನು ಬಿಜೆಪಿಗೆ ಆಹ್ವಾನ ಮಾಡಿದ್ದು ತಮಾಷೆಗೆ, ಟಿಕೆಟ್ ಕೇಳಬೇಡಿ...: ಸಿ.ಟಿ.ರವಿ

Similar News