ಧಾರವಾಡದ ಕುಂದಗೋಳದಲ್ಲಿ ಅಮಿತ್ ಶಾ ರೋಡ್ ಶೋ; ಸಿಎಂ ಬೊಮ್ಮಾಯಿ, ಬಿಎಸ್ ವೈ ಸಾಥ್

Update: 2023-01-28 16:50 GMT

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಧಾರವಾಡದ ಕುಂದಗೋಳದಲ್ಲಿ ರೋಡ್ ಷೋದಲ್ಲಿ ಭಾಗವಹಿಸಿದ್ದರು. ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ನಡೆದ ಈ ರೋಡ್ ಷೋ ಸಂದರ್ಭದಲ್ಲಿ ಜನಸಾಗರವೇ ಹರಿದು ಬಂದಿತ್ತು.

ರೋಡ್ ಷೋ ನಡೆಸುತ್ತಿರುವ ಮಾರ್ಗದಲ್ಲಿ ಪೊಲೀಸರ ಬಿಗಿಭದ್ರತೆ ಏರ್ಪಡಿಸಲಾಗಿತ್ತು. ಪ್ರವಾಸಿ ಮಂದಿರದ ಬಳಿಯಿಂದ ಗಾಳಿ ಮಾರೆಮ್ಮ ದೇವಸ್ಥಾನದವರೆಗೆ ರೋಡ್ ಷೋ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಮತ್ತು ಪಕ್ಷದ ಹಿರಿಯರಾದ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

Similar News