ಮೂಡಿಗೆರೆ | ಗೋಮಾಂಸ ಮಾರಾಟ ಆರೋಪ: ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಬಜರಂಗದಳ ಕಾರ್ಯಕರ್ತರು

Update: 2023-01-29 10:36 GMT

ಚಿಕ್ಕಮಗಳೂರು, ಜ.29: ಬೈಕಿನಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಬಜರಂಗ ದಳದ ಕಾರ್ಯಕರ್ತರು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಮೂಡಿಗೆರೆ ಸಮೀಪದ ಮುದ್ರೆಮನೆ ಎಸ್ಟೇಟ್ ಬಳಿ‌ ನಡೆದಿರುವುದು ವರದಿಯಾಗಿದೆ.

ಹಲ್ಲೆಗೊಳಗಾದ ಯುವಕ ಅಸ್ಸಾಂ ಮೂಲದವನೆಂದು ತಿಳಿದುಬಂದಿದೆ.

ಆರೋಪಿ ಯುವಕ ಬೈಕಿನಲ್ಲಿ ಕೊಂಡೊಯ್ದು ಗೋಮಾಂಸ ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಈತನನ್ನು ಬಜರಂಗದಳದ ಕಾರ್ಯಕರ್ತರು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

 ಆರೋಪಿಯನ್ನು ವಶಕ್ಕೆ ಪಡೆದ ಗೋಣಿಬೀಡು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Similar News