ವಿಟ್ಲ: ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Update: 2023-01-29 13:02 GMT

ವಿಟ್ಲ: ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಕನ್ಯಾನ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಕೇರಳ ಮೂಲದ ವಿನಯನ್ (58) ಎಂದು ಗುರುತಿಸಲಾಗಿದೆ.

ವಿನಯನ್ ಅವರ ಮೃತದೇಹವು ಕನ್ಯಾನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬ ಮಾಹಿತಿ ತನಿಖೆ ನಂತರವಷ್ಟೇ ತಿಳಿಯಬೇಕಿದೆ.

ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್‌ ಕೊಲೆ: ಬಹಿರಂಗ ಹೇಳಿಕೆ ನೀಡಿದ ಶರಣ್‌ ಪಂಪ್‌ವೆಲ್

Similar News