ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ದಸ್ತಗೀರ್ ಕಂಡ್ಲೂರು ಆಯ್ಕೆ

Update: 2023-01-29 13:56 GMT

ಕುಂದಾಪುರ: ಇಂದು ನಡೆದ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕುಂದಾಪುರ ತಾಲೂಕು ಘಟಕದ ಸಭೆಯಲ್ಲಿ ಎಸ್. ದಸ್ತಗೀರ್ ಕಂಡ್ಲೂರು ಅವರನ್ನು ಸರ್ವಾನುಮತದಿಂದ ಒಕ್ಕೂಟದ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ತಾಲೂಕು ಉಪಾಧ್ಯಕ್ಷರಾಗಿ ಎಸ್. ಎಸ್. ಹನೀಫ್ ಗುಲ್ವಾಡಿ, ಕಾರ್ಯದರ್ಶಿಯಾಗಿ ರಿಯಾಝ್ ಕೋಡಿ, ಜೊತೆ ಕಾರ್ಯದರ್ಶಿಯಾಗಿ ಜಿ. ಎಮ್. ಅಬೂಬಕರ್ ಮಾವಿನಕಟ್ಟೆ, ಕೋಶಾಧಿಕಾರಿಯಾಗಿ ಮುಜಾವರ್ ಅಬು ಮುಹಮ್ಮದ್ ಕುಂದಾಪುರ ಆಯ್ಕೆಯಾದರು.

ಮುಹಮ್ಮದ್ ರಫೀಕ್ ಬಿ. ಎಸ್. ಎಫ್., ಶಾಬಾನ್ ಹಂಗಳೂರು, ಮೌಲಾನಾ ಝಮೀರ್ ಅಹ್ಮದ್ ರಶಾದಿ, ಜಿ. ರೆಹಾನ್ ತ್ರಾಸಿ, ಮುಹಮ್ಮದ್ ರಫೀಕ್ ವಂಡ್ಸೆ, ಎಸ್. ಮುನೀರ್ ಕಂಡ್ಲೂರು, ಪಳ್ಳಿ ಉಸ್ಮಾನ್ ಗುಲ್ವಾಡಿ, ಮುನಾಫ್ ಕೋಡಿ, ನಸೀರ್ ನಯ್ನಾರ್ ಕೋಡಿ, ಅಬ್ದುಲ್ ಖಾದರ್ ಮೂಡಗೋಪಾಡಿ  ತಾಲೂಕು ಸಮಿತಿ ಸದಸ್ಯರಾಗಿ ಆಯ್ಕೆಯಾದರು. ಝಹೀರ್ ನಾಖುದಾ ಗಂಗೊಳ್ಳಿ, ಫಾರೋಕ್ ಹಳವಳ್ಳಿ, ಮುಹಮ್ಮದ್ ರಫೀಕ್ ಬೆಳ್ವೆ, ಕಲಂದರ್ ಹಂಗಳೂರು ಅವರನ್ನು ತಾಲೂಕು ಸಮಿತಿಯ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಯಿತು. ನಿಕಟಪೂರ್ವ ಅಧ್ಯಕ್ಷರಾದ ಇಬ್ರಾಹಿಮ್ ಕೋಟ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮೌಲಾನಾ ಝಮೀರ್ ಅಹ್ಮದ್ ರಶಾದಿಯವರ ಕುರ್ ಆನ್ ಪಠಣದೊಂದಿಗೆ ಸಭೆ ಆರಂಭವಾಯಿತು. ಮುಹಮ್ಮದ್ ರಫೀಕ್ ಬಿ. ಎಸ್. ಎಫ್. ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇದ್ರೀಸ್ ಹೂಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್. ಕೆ. ಇಕ್ಬಾಲ್ ಕಟಪಾಡಿ ಚುನಾವಣಾ ಪ್ರಕ್ರಿಯೆ ನಡೆಸಿ ಕೊಟ್ಟರು. ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ಮೌಲಾ ಉಡುಪಿ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಹಾಲಿ ಅಧ್ಯಕ್ಷರಾದ ಮುಹಮ್ಮದ್ ರಫೀಕ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.

Similar News