ಶರಣ್ ಪಂಪ್‌ವೆಲ್ ಹೇಳಿಕೆ : ನ್ಯಾಯಾಂಗ ತನಿಖೆಗೆ ನಝೀರ್ ಉಳ್ಳಾಲ್ ಒತ್ತಾಯ

Update: 2023-01-29 18:20 GMT

ಮಂಗಳೂರು: ತುಮಕೂರಿನಲ್ಲಿ ನಡೆದ ಶೌರ್ಯ ಯಾತ್ರೆ ಕಾರ್ಯಕ್ರಮದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಹಿಂದುತ್ವ ಸಂಘಟನೆಯ ಕಾರ್ಯಕರ್ತರೇ  ಫಾಝಿಲ್‌ನನ್ನು ಕೊಲೆ ಮಾಡಿರುವುದಾಗಿ ಬಹಿರಂಗ ಹೇಳಿಕೆ ನೀಡಿರುವ ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಜೆಡಿಎಸ್ ದ.ಕ.ಜಿಲ್ಲಾ ಕಾರ್ಯಾಧ್ಯಕ್ಷ ನಝೀರ್ ಉಳ್ಳಾಲ್ ಒತ್ತಾಯಿಸಿದ್ದಾರೆ.

ರಾಜ್ಯ ಬಿಜೆಪಿ ಸರಕಾರವು ಹಿಂದುತ್ವವಾದಿ ಸಂಘಟನೆಗೆ ಬೆಂಬಲ ನೀಡುತ್ತಿರುವುದರಿಂದ ಪೊಲೀಸ್ ಇಲಾಖೆಯ ತನಿಖೆಯಲ್ಲಿ ನಿಷ್ಪಕ್ಷಪಾತ ಕಾಣಿಸದು. ಸರಕಾರಿ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ತನಿಖೆಯ ಅಗತ್ಯವಿದೆ. ಹಿಂದೂ ಮತ್ತು‌‌ ಮುಸ್ಲಿಮರ ಮಧ್ಯೆ ವೈಷಮ್ಯದ ವಿಷ ಬೀಜ ಬಿತ್ತುವ‌ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ನಝೀರ್ ಉಳ್ಳಾಲ್ ಆಗ್ರಹಿಸಿದ್ದಾರೆ.

Similar News