ಹಂಪಿ ಉತ್ಸವದ ವೇಳೆ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

Update: 2023-01-30 05:15 GMT

ಹಂಪಿ(ಹೊಸಕೋಟೆ): ಹಂಪಿ ಉತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ರವಿವಾರ ತಡರಾತ್ರಿ ನಡೆದ ಸಂಗೀತ ಕಾರ್ಯಕ್ರಮದ ವೇಳೆ ಬಹುಭಾಷಾ ಗಾಯಕ ಕೈಲಾಶ್ ಖೇರ್ ಮೇಲೆ  ಬಾಟಲಿ ಎಸೆದಿರುವ ಘಟನೆ ನಡೆದಿದ್ದು,ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ರಾತ್ರಿ ಒಂದೂವರೆ ಗಂಟೆಗೆ ಕೈಲಾಶ್ ಖೇರ್ ಅವರು ಹಂಪಿ ಗಾಯತ್ರಿ ಪೀಠದ ಪ್ರಧಾನ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು. ಈ ವೇಳೆ ಅವರ ಮೇಲೆ ಪ್ರೇಕ್ಷಕರ ಗ್ಯಾಲರಿಯಿಂದ ಯಾರೋ ನೀರು ತುಂಬಿದ ಬಾಟಲಿ ಎಸೆದರು. ಆದರೆ ಬಾಟಲಿ ಅವರಿಂದ ಸ್ವಲ್ಪ ದೂರದಲ್ಲೇ ಬಿದ್ದಿದೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಜನರು ನಡುವಿನಲ್ಲಿ ಘಟನೆಗೆ ಕಾರಣರಾದ ಇಬ್ಬರನ್ನು ಗುರುತಿಸಿ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದರು.

ಆ ನಂತರ ಕಾರ್ಯಕ್ರಮ ಸುಗಮವಾಗಿ ನಡೆದು ರಾತ್ರಿ 2 ಗಂಟೆ ತನಕ ಕೈಲಾಶ್ ಖೇರ್ ಕಾರ್ಯಕ್ರಮ ನಡೆಸಿಕೊಟ್ಟರು ಎಂದು ವರದಿಯಾಗಿದೆ.

Similar News