ಶರಣ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಿ: ಅಕ್ಷಿತ್ ಸುವರ್ಣ

Update: 2023-01-30 08:58 GMT

ಮಂಗಳುರು: ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ನಡೆಸಿದ್ದೇವೆ ಎಂದು ವಿಹೆಚ್ ಪಿ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರವಾಗಿದೆ ಎಂದು ದ.ಕ. ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ಹೇಳಿಕೆ ನ್ಯಾಯಾಂಗ ವ್ಯವಸ್ಥೆಗೆ ಎಸೆದಿರುವ ಸವಾಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರಂತೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬ ಹೇಳಿಕೆಗೆ ನೇರವಾಗಿ ಬೆಂಬಲಿಸಿದಂತಾಗಿದ್ದು ಅಮಾಯಕರನ್ನು ಕೊಲ್ಲುವುದೇ ಇವರ ಹಿಡನ್ ಅಜೆಂಡಾ ಆಗಿ ಉಳಿದಿದೆ.  ಸಾರ್ವಜನಿಕ ಸಭೆಯಲ್ಲಿ ಭಯ ಹುಟ್ಟಿಸುವಂತಹ ಹೇಳಿಕೆಗಳನ್ನು ನೀಡಿದ ವ್ಯಕ್ತಿಯ ವಿರುದ್ಧ ಪೊಲೀಸ್ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಾಚಿಕೆಗೇಡಿನ  ಸಂಗತಿಯಾಗಿದೆ. ಇವರ ಇಂತಹ ಹೇಳಿಕೆಗಳು ನಾಗರಿಕ ಸಮಾಜ ತಲೆ ಬಾಗಿಸುವಂತಹ ಕೆಲಸ ಕೇಂದ್ರ ಸರಕಾರ ಮಾಡಿದೆ ಎಂದರು.

ಶರಣ್ ಹೇಳಿಕೆ ಸಮಾಜದಲ್ಲಿ ಹತ್ಯೆ ಹಾಗೂ ಘರ್ಷಣೆಗೆ ಪ್ರಚೋದನೆ ನೀಡುವಂತಿದ್ದು, ಇಂದು ಅಮಾಯಕ ಯುವಕರನ್ನು ಇಂತಹ ಸಮಾಜದ್ರೋಹಿ ಕೆಲಸಗಳಿಗೆ ಬಳಸಿಕೊಂಡು ಚುನಾವಣೆ ಹತ್ತಿರವಿರುವ ಸಮಯದಲ್ಲಿ ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡಲು ಕಾರಣವಾಗುತ್ತಿದೆ. ಇದಕ್ಕೆ ಅವಕಾಶ ನೀಡದೆ ಇಂತಹ ಹೇಳಿಕೆ ನೀಡಿರುವ ಶರಣ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಿಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News