×
Ad

ಸಿನೆಮಾ ಸ್ಟಾರ್‌ಗಳ ಸ್ಮಾರಕಗಳಿಗೆ ಸಾರ್ವಜನಿಕರ ಜಾಗ, ಹಣ ಬಳಸಬಾರದು: ಚೇತನ್ ಅಹಿಂಸಾ

Update: 2023-01-30 20:26 IST

ಬೆಂಗಳೂರು: 'ಚಲನಚಿತ್ರ ನಟರ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ, ಮತ್ತು ಸಂಪನ್ಮೂಲಗಳನ್ನು ಬಳಸಬಾರದು' ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. 

ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅರು, 'ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್‌ಗಳು, ಈಗಾಗಲೇ ನಮ್ಮ ಸಮಾಜದಲ್ಲಿ ಅನಗತ್ಯ ಪ್ರಚಾರ ಮತ್ತು ತಮ್ಮ ಚಲನಚಿತ್ರಗಳ ಯಶಸ್ಸಿಗೆ ಅನಗತ್ಯವಾಗಿ ಗಮನ ಪಡೆಯುತ್ತಾರೆ. ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ವಸ್ತುಸಂಗ್ರಹಾಲಯಗಳಿಗೆ ಸ್ಮಾರಕ ಭೂಮಿಗಳು ಉಪಯೋಗಕ್ಕೆ ಬರುತ್ತವೆ' ಎಂದು ಬರೆದುಕೊಂಡಿದ್ದಾರೆ. 

Similar News