ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಜೀವ ಬೆದರಿಕೆ, ಆರೋಪಿ ವಶಕ್ಕೆ

Update: 2023-01-31 04:32 GMT

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್(Arvind Kejriwal) ಅವರಿಗೆ ಸೋಮವಾರ ತಡರಾತ್ರಿ ಕೊಲೆ ಬೆದರಿಕೆ ಬಂದಿದೆ ಎಂದು India Today ವರದಿ ಮಾಡಿದೆ.

ಆರೋಪಿ ಸೋಮವಾರ ಮಧ್ಯರಾತ್ರಿ 12.05ಕ್ಕೆ ಪಿಸಿಆರ್ ಕರೆ ಮಾಡಿ ಅರವಿಂದ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಕರೆ ಬಂದ ನಂತರ ದಿಲ್ಲಿ  ಪೊಲೀಸರು ಕಾರ್ಯಾಚರಣೆ ನಡೆಸಿ ಬೆದರಿಕೆ ಕರೆ ಮಾಡಿದಾತನನ್ನು ಗುರುತಿಸಿದ್ದಾರೆ. ಕೆಲವೇ ಸಮಯದಲ್ಲಿ ಆತನನ್ನು ವಶಕ್ಕೆ ಪಡೆಯಲಾಯಿತು.

ಪೊಲೀಸರ ಪ್ರಕಾರ, ಕರೆ ಮಾಡಿದ ವ್ಯಕ್ತಿ 38 ವರ್ಷದ ಮಾನಸಿಕ ಅಸ್ವಸ್ಥನಾಗಿದ್ದಾನೆ..

ಆರೋಪಿ ದಿಲ್ಲಿಯ ಗುಲಾಬಿ ಬಾಗ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಕಾರಣಕ್ಕಾಗಿ ಪೊಲೀಸರು ಅವನನ್ನು ಬಂಧಿಸಲಿಲ್ಲ.

Similar News