ಮಂಗಳೂರು| ಮೊಬೈಲ್ ಬಳಕೆಗೆ ಪೋಷಕರ ಆಕ್ಷೇಪ: ಬಾಲಕ ಆತ್ಮಹತ್ಯೆ

Update: 2023-01-31 07:41 GMT

ಮಂಗಳೂರು: ಮನೆಯಲ್ಲಿ ಮೊಬೈಲ್ ಬಳಕೆ ಮಾಡುವುದಕ್ಕೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದಕ್ಕೆ ಬಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಕೋಟಿಮುರ ಎಂಬಲ್ಲಿ ಜ.30ರಂದು ನಡೆದಿರುವುದಾಗಿ ವರದಿಯಾಗಿದೆ.

ನಗರದ ಪದವು ಬಿ. ಗ್ರಾಮದ ಕೋಟಿಮುರದ ನಿವಾಸಿ ಜಗದೀಶ್ ಎಂಬವರ ಪುತ್ರ, 9ನೇ ತರಗತಿಯ ವಿದ್ಯಾರ್ಥಿ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ.

ಜ್ಞಾನೇಶ್ ವಿಪರೀತವಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಬಗ್ಗೆ ಈತನ ತಾಯಿ ಗದರಿಸಿದ್ದರು. ಇದರಿಂದ ಬೇಸರಗೊಂಡ ಬಾಲಕ ಸ್ನಾನ ಮಾಡಿ ಬರುವುದಾಗಿ ರೂಮಿಗೆ ಹೋಗಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ  ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News