ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಮಗು ಮೃತ್ಯು
Update: 2023-01-31 10:51 GMT
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಮಗುವೊಂದು ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸೋಮವಾರ ಸಂಭವಿಸಿದೆ.
ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಅಪಘಾತದಲ್ಲಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಇವರು ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸೇತುವೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ.
ಅಪಘಾತದ ತೀವ್ರತೆಗೆ ಮಗು ತಾಯಿಯ ಕೈಯಿಂದ ರಸ್ತೆಗೆ ಎಸೆಯಲ್ಪಟ್ಟಿದೆ. ರಿಕ್ಷಾದಲ್ಲಿದ್ದ ಮಗುವಿನ ತಾಯಿ ಗೀತಾ ಹಾಗೂ ರತ್ನ ಎಂಬವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಗು ಮೃತಪಟ್ಟಿತ್ತು ಎನ್ನಲಾಗಿದೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿವಪ್ರಕರಣ ದಾಖಲಾಗಿದೆ.