ಮೋದಿಯಂತಹ ನಾಯಕ ಸಿಕ್ಕಿರುವುದು ನಮ್ಮ ಪುಣ್ಯ: ಬಿ.ಎಸ್. ಯಡಿಯೂರಪ್ಪ

Update: 2023-01-31 11:54 GMT

ಶಿವಮೊಗ್ಗ, ಜ.31: ಬಿಜೆಪಿಯ ರಾಷ್ಟ್ರೀಯ ವರಿಷ್ಠರು ಕರ್ನಾಟಕದ ಬಗ್ಗೆ ಹೆಚ್ಚಿನ ಗಮನ ನೀಡಿದ್ದು, ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಡಿಜಿಟಲ್ ವಾಲ್ ಪೈಂಟಿಗ್‌ಗೆ ಚಾಲನೆ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿಯಂತಹ ನಾಯಕ ನಮಗೆ ಸಿಕ್ಕಿರುವುದು ನಮ್ಮ ಪುಣ್ಯ. ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವಂತಹ ಸಂಕಲ್ಪ ಮತದಾರರು ಮಾಡಬೇಕು. ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಬಿಜೆಪಿಯ ಸಾಧನೆಯಿಂದ ರಾಷ್ಟ್ರೀಯ ವರಿಷ್ಟರ ಅಭಿಲಾಷೆಯಂತೆ ಈ ಬಾರಿ ನಾವು 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ಸ್ಪಷ್ಟ ಬಹುಮತ ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಯಾರು ತಾವೇ ಮುಖ್ಯಮಂತ್ರಿ ಅಂತ ತಿರುಕನ ಕನಸು ಕಾಣ್ತಿದ್ದಾರೊ ಅದು ಸಾಧ್ಯವಿಲ್ಲ ಎಂದರು.

ರಮೇಶ ಜಾರಕಿಹೊಳಿ ಆಡಿಯೊ ಬಹಿರಂಗ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರಿಗೆ ಸಂಬಂಧಪಟ್ಟ ವಿಷಯ, ನಾನು ಕಮೆಂಟ್ ಮಾಡಲ್ಲ. ನನಗೇನೂ ಆ ಬಗ್ಗೆ ಗೊತ್ತಿಲ್ಲ ಎಂದರು.

Similar News