ಉಳ್ಳಾಲ ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ: ಮೀನುಗಾರರ ರಕ್ಷಣೆ

Update: 2023-02-02 14:45 GMT

ಮಂಗಳೂರು: ಉಳ್ಳಾಲದ ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್‌ಬೋಟ್‌ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ.

ಬೋಟಿನಲ್ಲಿದ್ದ 8 ಮಂದಿ  ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಜ.31ರಂದು ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ. ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಕರಾವಳಿ ಕಾವಲು ಪಡೆಯ ಠಾಣೆಗೆ ದೂರು ನೀಡಲಾಗಿದೆ.

Similar News