ಸಂಚಾರ ನಿಯಮ ಉಲ್ಲಂಘನೆ: ದಂಡ ಕಟ್ಟುವವರಿಗೆ ಶೇ.50ರ ರಿಯಾಯಿತಿ; ಸಾರಿಗೆ ಇಲಾಖೆ ಆದೇಶ
ಫೆ.11 ಅಂತಿಮ ದಿನಾಂಕ
Update: 2023-02-02 16:14 GMT
ಬೆಂಗಳೂರು, ಫೆ.2: ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಲು ಬಾಕಿ ಇರುವವರು ಮತ್ತು ಪ್ರಕರಣ ಕೋರ್ಟ್ನಲ್ಲಿ ಇದ್ದರೆ ಅಂಥವರಿಗೆ ಶೇ.50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಫೆ.11ರಂದು ಲೋಕ ಅದಾಲತ್ ನಡೆಯಲಿರುವ ಹಿನ್ನಲೆ ದಂಡ ಪಾವತಿಯಲ್ಲಿ ರಿಯಾಯಿತಿ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ವೀರಪ್ಪ ಅವರು ಮನವಿ ಮಾಡಿದ್ದರು.
ಅದರಂತೆ ಶೇ.50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ. ಫೆ.11ರ ಒಳಗಾಗಿ ಫೈನ್ ಕಟ್ಟುವವರು ಕಟ್ಟಬಹುದಾಗಿದೆ. ಫೆ.11ರ ನಂತರ ಸಂಪೂರ್ಣ ದಂಡದ ಮೊತ್ತ ಪಾವತಿಸಬೇಕು.