ಅಕ್ರಮ ಧಾರ್ಮಿಕ ಕಟ್ಟಡಗಳ ಪ್ರಕರಣ: ವಿಕ್ರಂ ಹುಯಿಲಗೋಳ ಅಮಿಕಸ್ ಕ್ಯೂರಿಯಾಗಿ ನೇಮಕ

Update: 2023-02-02 17:23 GMT

ಬೆಂಗಳೂರು, ಫೆ.2: ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಪ್ರಕರಣಕ್ಕೆ ಸಂಬಂಧಿಸಿ ಅಮಿಕಸ್ ಕ್ಯೂರಿಯಾಗಿ ಹೈಕೋರ್ಟ್ ಹಿರಿಯ ವಕೀಲರಾದ ವಿಕ್ರಂ ಹುಯಿಲಗೋಳ ನೇಮಕವಾಗಿದ್ದಾರೆ. 

ಸುಪ್ರೀಂಕೋರ್ಟ್ ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ನೀಡಿರುವ ನಿರ್ದೇಶನ ಜಾರಿ ಹಿನ್ನೆಲೆಯಲ್ಲಿ ಹೈಕೋರ್ಟ್ ದಾಖಲಿಸಿಕೊಂಡ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. 

ಈ ವೇಳೆ ನ್ಯಾಯಪೀಠವು ಅಮಿಕಸ್ ಕ್ಯೂರಿಯಾಗಿ ಹಿರಿಯ ವಕೀಲರಾದ ವಿಕ್ರಂ ಹುಯಿಲಗೋಳರನ್ನು ನೇಮಕ ಮಾಡಿತು. 
ಅಲ್ಲದೆ, ಅಮಿಕಸ್ ಅವರಿಗೆ ಪಿಐಎಲ್‍ನ ಎಲ್ಲ್ಲ ದಾಖಲೆಯನ್ನು ರಿಜಿಸ್ಟ್ರಾರ್ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಲಾಗಿದೆ.

Similar News