ಉಡುಪಿ ಜಿಲ್ಲಾಮಟ್ಟದ ಶಿಕ್ಷಣ ಹಕ್ಕು ಕಾಯ್ದೆ ಕುರಿತ ಸಮಾಲೋಚನಾ ಸಭೆ

Update: 2023-02-02 18:41 GMT

ಉಡುಪಿ: ಮಂಗಳೂರು ಪಡಿ ಸಂಸ್ಥೆ, ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಶಿಕ್ಷಣ ಹಕ್ಕು ಕಾಯ್ದೆ 2009ರ ಕುರಿತು ಸಮಾಲೋಚನಾ ಸಭೆಯನ್ನು ಗುರುವಾರ ಉಡುಪಿ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಉಡುಪಿ ತಾಲೂಕು ಪಂಟಾಯತ್ ಕಾರ್ಯ ನಿರ್ವಹಣಾಧಿಕಾರಿ ವಿಜಯ ಮಾತನಾಡಿ, ಶಿಕ್ಷಣ ಹಕ್ಕು ಕಾಯಿದೆಯು ಗ್ರಾಮೀಣ ಪ್ರದೇಶ ಜನಪ್ರತಿನಿಧಿ, ವಿದ್ಯಾರ್ಥಿಗಳು ಹಾಗೂ ಅವರ ಪೋಷಕ ರನ್ನು ತಲುಪಬೇಕಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಣ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ತಿಳಿಸಿದರು.

ಪಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆನ್ನಿ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣದ ಹಕ್ಕು ಬದುಕುವ ಹಕ್ಕಿನಂತೆ ಪ್ರತಿ ಯೊಬ್ಬರ ಮೂಲಭೂತ ಹಕ್ಕು ಆಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತ ರಾದರೆ ಅವರಿಗೆ ಶಿಕ್ಷಣ ಸಿಗುವಂತೆ ಮಾಡುವುದು ಸರಕಾರದ ಜವಾಬ್ದಾರಿ ಯಾಗಿದೆ. ಶಿಕ್ಷಣ ಹಕ್ಕು ಕಾಯಿದೆಯಡಿ ಗುಣಮಟ್ಟದ ಶಿಕ್ಷಣ, ಕಾಯಿದೆಯ ಅನುಷ್ಠಾನ ಹಾಗೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಯೋಜಕಿ ಸುನೀತಾ ವರದಿ ಮಂಡಿಸಿ ದರು. ಜಿಲ್ಲಾಧ್ಯಕ್ಷ ದಿವಾಕರ್ ಕುಮಾರ್ ಉಪಸ್ಥಿತರಿದ್ದರು. ತಾಲೂಕು ಕೇಂದ್ರದ ಸಲಹೆಗಾರ ಜಯವಂತ ರಾವ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ ವಂದಿಸಿದರು.

Similar News